ರಾಷ್ಟ್ರೀಯಸೇವಾಯೋಜನಾಘಟಕದಉದ್ಘಾಟನಾ ಕಾರ್ಯಕ್ರಮ

ದಿನಾಂಕ 06-11-2023ರಂದು ನಮ್ಮ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿ ಅಭ್ಯಾಗತರಾದ ಜಯಕರ್‌ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಪ್ರತಿಫಲವನ್ನು ಬಯಸದೇ ನಾವು ಮಾಡುವ ಪ್ರತಿಯೊಂದು ಸೇವೆಯೂ ಮುಂದೆ ನಮ್ಮ ಬದುಕಿನಲ್ಲಿ ದಾರಿದೀಪವಾಗಲಿದೆ ಎಂಬ ತಮ್ಮ ಮಾತುಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೆ ಯವರು ವಹಿಸಿಕೊಂಡು ಶುಭ ಹಾರೈಸಿದರು. ಖ್ಯಾತ ರಂಗಕರ್ಮಿ ರವಿರಾಜ್‌ ಹೆಚ್.‌ ಪಿ, ಪತ್ರಕರ್ತ ಜನಾರ್ಧನ್‌ ಕೊಡವೂರು, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀ ಚಿರಂಜನ್‌  ಕೆ ಶೇರಿಗಾರ್‌, ಡಾ. ಪ್ರಜ್ಞಾ ಮಾರ್ಪಳ್ಳಿ ವಿದ್ಯಾರ್ಥಿ ಪ್ರತಿನಿಧಿಗಳಾದ ಕು. ಶ್ರೀಜಾ, ಕು. ದಿಶಾ, ಚೈತನ್ಯ ಹಾಗೂ ದೀಪಕ್‌ ಕಾಮತ್‌ ಎಳ್ಳಾರೆ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ನಾಯಕಿಯಾದ ಶ್ರೀಮತಿ ಸೌಜನ್ಯ ಇವರು ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆಯಾದ ಡಾ. ಪ್ರಜ್ಞಾ ಮಾರ್ಪಳ್ಳಿ ಇವರು ವಂದಿಸಿದರು. ಕು. ಸಿಂಚನಾ ಕಾರ್ಯಕ್ರಮವನ್ನು ನಿರೂಪಿಸಿದರು.

Share on facebook
Share on linkedin
Share on whatsapp

Explore

Subscribe to Newsletter

SRI POORNAPRAJNA EVENING COLLEGE UDUPI-576101

Contact Us

Sri Poornaprajna Evening College
Udupi, Karnataka- 576101
Phone: 0820 252 0743
Email : sppecudupi@gmail.com

Important Links

Reach Us